Thursday, January 31, 2013

ಕೆ. ಎಸ್. ನಿಸ್ಸಾರ್ ಅಹ್ಮೆದ್--ಎಲ್ಲ ಮರೆತಿರುವಾಗ...

ಎಲ್ಲ ಮರೆತಿರುವಾಗ...


- ಕೆ. ಎಸ್. ನಿಸ್ಸಾರ್ ಅಹ್ಮೆದ್

ಎಲ್ಲ ಮರೆತಿರುವಾಗ ಇಲ್ಲ ಸಲ್ಲದ ನೆವವ
ಹೂಡಿ ಬರದಿರು ಮತ್ತೆ ಹಳೆಯ ನೆನಪೇ ||
ಕಲ್ಲಿನಂದದಿ ಬಿದ್ದು ತಿಳಿಯಾದ ಎದೆಗೊಳವ
ರಾಡಿಗೊಳಿಸುವೆಯೇಕೆ ಮಧುರ ನೆನಪೇ ?

ಕಪ್ಪು ಕಣ್ಣಿನ ದಿಟ್ಟ ನೋಟದರೆಕ್ಷಣದಲ್ಲಿ
ತೊಟ್ಟ ಬಾಣದ ಹಾಗೆ ಬಾರದಿರು ನೆನಪೇ
ಬಿರಿದ ತುಟಿಗಳ ತುಂಬು ನಗೆಯ ಕಾರಣವನ್ನೇ
ಹಿರಿದು ಕೊಲ್ಲಲು ಬಳಿಗೆ ಸಾರದಿರು ನೆನಪೇ

ಸತ್ತ ಬೂತವನೆತ್ತಿ ಹತ್ತಿನಂದದಿ ತಂದು
ನನ್ನ ಮನದಂಗಳಕೆ ಹಾಕದಿರು ನೆನಪೇ
ಭವ್ಯ ಭವಿತವ್ಯಕ್ಕೆ ಮೊಗ ಮಾಡಿ ನಿಂದಿರುವೆ
ಬೆನ್ನಲ್ಲೇ ಇರಿಯದಿರು ಚೆಂದ ನೆನಪೇ


ಕುವೆಂಪು-ತನುವು ನಿನ್ನದು ಮನವು ನಿನ್ನದು

ದೋಣಿ ಸಾಗಲಿ...

- ಕುವೆಂಪು

ದೋಣಿ ಸಾಗಲಿ ಮುಂದೆ ಹೋಗಲಿ ದೂರ ತೀರವ ಸೇರಲಿ
ಬೀಸುಗಾಳಿಗೆ ಬೀಳು ತೇಲುವ ತೆರೆಯ ಮೇಗಡೆ ಹಾರಲಿ ||

ಹೊನ್ನಗಿಂಡಿಯ ಹಿಡಿದು ಕೈಯೊಳು ಹೇಮವಾರಿಯ ಚಿಮುಕಿಸಿ
ಮೇಘ ಮಾಲೆಗೆ ಬಣ್ಣವೀಯುತ ಯಕ್ಷಲೋಕವ ವಿರಚಿಸಿ
ನೋಡಿ ಮೂದನದಾ ದಿಗಂತದಿ ಮೂಡು ವೆಣ್ಣಿನ ಮೈಸಿರಿ
ರಂಜಿಸುತ್ತಿದೆ ಚೆಲುವೆಯಾಕೆಗೆ ಸುಪ್ರಭಾತವ ಬಯಸಿರಿ

ಕೆರೆಯ ಅಂಚಿನ ಮೇಲೆ ಮಿಂಚಿನ ಹನಿಗಳಂದದಿ ಹಿಮಮಣಿ
ಮಿನ್ಚುತೀಪು ಮೂಡು ತೈತಾರೆ ಬಾಲಕೋಮಲ ದಿನಮಣಿ
ಹಸಿರು ಜೋಳದ ಹೊಲದ ಗಾಳಿಯು ತೀಡಿ ತಣ್ಣಗೆ ಬರುತಿರೆ
ಹುದುಗಿ ಹಾಡುವ ಮತ್ತ ಕೋಕಿಲ ಮಧುರ ವಾಣಿಯ ತರುತಿರೆ

ದೂರ ಬೆಟ್ಟದ ಮೇಲೆ ತೇಲುವ ಬಿಳಿಯ ಮೋಡವ ನೋಡಿರಿ
ಅದನೆ ಹೋಲುತ ಅಂತೆ ತೇಲುತ ದೋಣಿಯಾಟವ ನಾಡಿರಿ
ನಾವು ಲೀಲಾಮಾತ್ರ ಜೀವರು ನಮ್ಮ ಜೀವನ ಲೀಲೆಗೆ
ನೆನ್ನೆ ನೆನ್ನೆಗೆ ಇಂದು ಇಂದಿಗೆ ಇರಲಿ ನಾಳೆಯು ನಾಳೆಗೆ
! ನನ್ನ ಚೇತನ...

-ಕುವೆಂಪು

! ನನ್ನ ಚೇತನ
ಆಗು ನೀ ಅನಿಕೇತನ ||

ರೂಪ ರೂಪಗಳನು ದಾಟಿ
ನಾಮ ಕೋಟಿಗಳನು ಮೀಟಿ
ಎದೆಯ ಬಿರಿಯ ಭಾವದೀಟಿ

ನೂರು ಮತದ ಹೊಟ್ಟ ತೂರಿ
ಎಲ್ಲ ತತ್ವದೆಲ್ಲೆ ಮೀರಿ
ನಿರ್ದಿಗಂತವಾಗಿ ಏರಿ

ಎಲ್ಲಿಯೂ ನಿಲ್ಲದಿರು
ಮನೆಯನೆಂದು ಕಟ್ಟದಿರು
ಕೊನೆಯನೆಂದು ಮುಟ್ಟದಿರು
! ಅನಂತವಾಗಿರು

ಅನಂತ ತಾನ್ ಅನಂತವಾಗಿ
ಆಗುತಿಹನೆ ನಿತ್ಯಯೋಗಿ
ಅನಂತ ನೀ ಅನಂತವಾಗು
ಆಗು ಆಗು ಆಗು ಆಗು
ತೆರೆದಿದೆ ಮನೆ ...

- ಕುವೆಂಪು

ತೆರೆದಿದೆ ಮನೆ ಬಾ ಅಥಿತಿ ||
ಹೊಸ ಬೆಳಕಿನ ಹೊಸ ಗಾಳಿಯ
ಹೊಸ ಬಾಳನು ತಾ ಅಥಿತಿ

ಆವ ರೂಪದೊಳು ಬಂದರು ಸರಿಯೇ
ಆವ ವೇಷದೊಳು ನಿಂದರು ಸರಿಯೇ
ನೇಸರುದಯದೊಳು ಬಗೆಯ ಬಾ
ತಿಂಗಳಂದದಲಿ ಬಗೆಯ ಬಾ

ಇಂತಾದರು ಬಾ ಅಂತಾದರೂ ಬಾ ಎಂತಾದರು ಬಾ ಬಾ ಬಾ
ಬೇಸರವಿದನು ಸರಿಸುವ ಹೊಸಬಾಳ ಉಸಿರಾಗಿ ಬಾ ಬಾ ಬಾ

ಕಡಲಾಗಿ ಬಾ ಬಾನಾಗಿ ಬಾ ಗಿರಿಯಾಗಿ ಬಾ ಕಾನಾಗಿ ಬಾ
ಕಡಲಾಗಿ ಬಾನಾಗಿ ಗಿರಿಯಾಗಿ ಕಾನಾಗಿ
ತೆರೆದಿದೆ ಮನವು ಬಾ
ಹೊಸತಾನದ ಹೊಸಗಾನದ
ರಸ ಜೀವ ತಾ ತಾ ತಾ
ಬಾರಿಸು ಕನ್ನಡ...

- ಕುವೆಂಪು

ಬಾರಿಸು ಕನ್ನಡ ಡಿಂಡಿಮವ ||
! ಕರ್ನಾಟಕ ಹೃದಯ ಶಿವ

ಸತ್ತಂತಿಹರನು ಬಡಿದೆಚ್ಚರಿಸು
ಕಚ್ಚಾಡುವರನು ಕೂಡಿಸಿ ವಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು

ಚೈತ ಶಿವೇತರ ಕೃತಿ ಕೃತಿಯಲ್ಲಿ
ಮೂಡಲಿ ಮಂಗಳ ಮತಿ ಮತಿಯಲ್ಲಿ
ಕವಿ ಋಷಿ ಸಂತರ ಆದರ್ಶದಲಿ
ಸರ್ವೋದಯವಾಗಲಿ ಸರ್ವರಲಿ
ತನುವು ನಿನ್ನದು...

- ಕುವೆಂಪು

ತನುವು ನಿನ್ನದು ಮನವು ನಿನ್ನದು ||
ಎನ್ನ ಜೀವನ ಧನವು ನಿನ್ನದು
ನಾನು ನಿನ್ನವನೆಂಬ ಹೆಮ್ಮೆಯ
ಋಣವು ಮಾತ್ರವೇ ನನ್ನದು

ನೀನು ಹೊಳೆದರೆ ನಾನು ಹೊಳೆವೆನು
ನೀನು ಬೆಳೆದರೆ ನಾನು ಬೆಳೆವೆನು
ನನ್ನ ಹರಣದ ಹರಣ ನೀನು
ನನ್ನ ಮರಣದ ಮರಣವು

ನನ್ನ ಮನದಲಿ ನೀನೆ ಯುಕ್ತಿ
ನನ್ನ ಹೃದಯದಿ ನೀನೆ ಭಕ್ತಿ
ನೀನೆ ಮಾಯಾ ಮೋಹ ಶಕ್ತಿ
ನನ್ನ ಜೀವನ ಮುಕ್ತಿಯು

! ನನ್ನ ಚೇತನ...

-ಕುವೆಂಪು

! ನನ್ನ ಚೇತನ
ಆಗು ನೀ ಅನಿಕೇತನ ||

ರೂಪ ರೂಪಗಳನು ದಾಟಿ
ನಾಮ ಕೋಟಿಗಳನು ಮೀಟಿ
ಎದೆಯ ಬಿರಿಯ ಭಾವದೀಟಿ

ನೂರು ಮತದ ಹೊಟ್ಟ ತೂರಿ
ಎಲ್ಲ ತತ್ವದೆಲ್ಲೆ ಮೀರಿ
ನಿರ್ದಿಗಂತವಾಗಿ ಏರಿ

ಎಲ್ಲಿಯೂ ನಿಲ್ಲದಿರು
ಮನೆಯನೆಂದು ಕಟ್ಟದಿರು
ಕೊನೆಯನೆಂದು ಮುಟ್ಟದಿರು
! ಅನಂತವಾಗಿರು

ಅನಂತ ತಾನ್ ಅನಂತವಾಗಿ
ಆಗುತಿಹನೆ ನಿತ್ಯಯೋಗಿ
ಅನಂತ ನೀ ಅನಂತವಾಗು
ಆಗು ಆಗು ಆಗು ಆಗು



ಜಿ. ಎಸ್. ಶಿವರುದ್ರಪ್ಪ...ಎದೆ ತುಂಬಿ ಹಾಡಿದೆನು...

ಎದೆ ತುಂಬಿ ಹಾಡಿದೆನು...

- ಜಿ. ಎಸ್. ಶಿವರುದ್ರಪ್ಪ

ಎದೆ ತುಂಬಿ ಹಾಡಿದೆನು ಅಂದು ನಾನು
ಮನವಿಟ್ಟು ಕೇಳಿದಿರಿ ಅಲ್ಲಿ ನೀವು||

ಇಂದು ನಾ ಹಾಡಿದರು ಅಂದಿನಂತೆಯೆ ಕುಳಿತು
ಕೇಳುವಿರಿ ಸಾಕೆನಗೆ ಅದುವೆ ಬಹುಮಾನ
ಹಾಡು ಹಕ್ಕಿಗೆ ಬೇಕೆ ಬಿರುದು ಸನ್ಮಾನ

ಎಲ್ಲ ಕೇಳಲಿ ಎಂದು ನಾನು ಹಾಡುವುದಿಲ್ಲ
ಹಾಡುವುದು ಅನಿವಾರ್ಯ ಕರ್ಮ ನನಗೆ

ಕೇಳುವವರಿಹರೆಂದು ನಾ ಬಲ್ಲೆ ಅದರಿಂದ
ಹಾಡುವೆನು ಮೈದುಂಬಿ ಎಂದಿನಂತೆ
ಯಾರು ಕಿವಿ ಮುಚ್ಚಿದರು ನನಗಿಲ್ಲ ಚಿಂತೆ
ಹಾಡು ಹಳೆಯದಾದರೇನು...

- ಜಿ. ಎಸ್. ಶಿವರುದ್ರಪ್ಪ

ಹಾಡು ಹಾಡು ಹಾಡು ಹಳೆಯದಾದರೇನು ಭಾವ ನವನವೀನ
ಎದೆಯ ಭಾವ ಹೊಮ್ಮುಹುದಕೆ ಭಾಷೆ ಒರಟು ಯಾನ ||

ಹಳೆಯ ಹಾಡು ಹಾಡು ಮತ್ತೆ ಅದನೆ ಕೇಳಿ ತಣಿಯುವೆ
ಹಳೆಯ ಹಾಡಿನಿಂದ ಹೊಸತು ಜೀವನ ಕಟ್ಟುವೆ

ಹಮ್ಮು ಬಿಮ್ಮು ಒಂದೂ ಇಲ್ಲ ಹಾಡು ಹೃದಯ ತೆರೆದಿದೆ
ಹಾಡಿನಲ್ಲಿ ಲೀನವಾಗಲೆನ್ನ ಮನವು ಕಾದಿದೆ
ಎಲ್ಲೋ ಹುಡುಕಿದೆ...

- ಜಿ. ಎಸ್. ಶಿವರುದ್ರಪ್ಪ

ಎಲ್ಲೋ ಹುಡುಕಿದೆ ಇಲ್ಲದ ದೇವರ
ಕಲ್ಲು ಮಣ್ಣುಗಳ ಗುಡಿಯೊಳಗೆ ||
ಇಲ್ಲೇ ಇರುವ ಪ್ರೀತಿ ಸ್ನೇಹಗಳ
ಗುರುತಿಸದಾದೆನು ನಮ್ಮೊಳಗೆ

ಎಲ್ಲಿದೆ ನಂದನ ಎಲ್ಲಿದೆ ಬಂಧನ
ಎಲ್ಲ ಇವೆ ನಮ್ಮೊಳಗೆ
ಒಳಗಿನ ತಿಳಿಯನು ಕಲಕದೆ ಇದ್ದರೆ
ಅಮೃತದ ಸವಿ ಇದೆ ನಾಲಿಗೆಗೆ

ಹತ್ತಿರವಿದ್ದು ದೂರ ನಿಲ್ಲುವೆವು
ನಮ್ಮ ಅಹಮ್ಮಿನ ಕೋಟೆಯಲಿ
ಎಷ್ಟು ಕಷ್ಟವೊ ಹೊಂದಿಕೆ ಎಂಬುದು
ನಾಲ್ಕು ದಿನದ ಬದುಕಿನಲಿ

ದೊಡ್ಡರಂಗೆ ಗೌಡ--ನಮ್ಮೂರ ಮಂದಾರ...

ನಮ್ಮೂರ ಮಂದಾರ...

- ದೊಡ್ಡರಂಗೆ ಗೌಡ

ನಮ್ಮೂರ ಮಂದಾರ ಹೂವೆ
ನನ್ನೊಲುಮೆ ಬಾಂದಳದ ಚೆಲುವೆ
ಬಳಿಬಂದು ಬಾಳನ್ನು ಬೆಳಗು
ನನ್ನ ಬರಿದಾದ ಮನದಲ್ಲಿ ಮಿನುಗು ||

ಕಣ್ಣಲ್ಲೆ ಕರೆದು ಹೊಂಗನಸ ತೆರೆದು
ಸಂಗಾತಿ ಸಂಪ್ರೀತಿ ಸೆಳೆದೆ
ಅನುರಾಗ ಹೊಳೆದು ಅನುಬಂಧ ಬೆಳೆದು
ಸಮ್ಮೋಹ ಸಂಬಂಧ ಮಿಡಿದೆ
ಮೂಡಿದ ಪ್ರೇಮದ ಸೊಗಸಾದ ಕಾರಂಜಿ ಬಿರಿದೆ

ಒಡಲಾಡ ಮೊರೆದು ಒಡನಾಟ ಮೆರೆದು
ಒಡನಾಡಿ ಭಾಂದವ್ಯ ಕಂಡೆ
ಋತುಮಾನ ಮೀರಿ ಹೊಸಗಾನ ತೋರಿ
ಹಿತವಾದ ಮಾಧುರ್ಯ ಮಿಂದೆ
ತೀರದ ಮೋಹದ ಇನಿದಾದ ಆನಂದ ತಂದೆ

ಪುರಂದರದಾಸ--ಆರು ಹಿತವರು

ಆರು ಹಿತವರು...

- ಪುರಂದರದಾಸ

ಆರು ಹಿತವರು ನಿನಗೆ ಮೂವರೊಳಗೆ ||
ನಾರಿಯೋ ಧಾರುಣಿಯೋ ಬಲುಧನದ ಸಿರಿಯೋ

ಮುನ್ನಶಥಕೋಟಿ ರಾಯರುಗಳಾಳಿದ ನೆಲವ
ತನ್ನದೆಂದೆನುತ ಶಾಸನವ ಬರಸಿ
ಬಿನ್ನಣದ ಮನೆಕಟ್ಟಿ ಕೋಟೆಕೊತ್ತಳವಿಕ್ಕಿ
ಚೆನ್ನಿಗನು ಅಸುವಳಿಯೆ ಹೊರಗೆ ಹಾಕುವರು

ಉದ್ಯೋಗ ವ್ಯವಹಾರ ನೃಪಸೇವೆ ಕುಶಲಗತಿ
ಶುದ್ರತನ ಕಳವೂ ಪರದ್ರೋಹದಿಂದ
ಬುದ್ಧಿಯಿಂದಲಿ ಗಳಿಸಿ ಇಟ್ಟಿದ ಅರ್ಥವನು
ಸತ್ಯದಲಿ ಆರು ಉಮ್ಬುವರು ಪೆಳೋ ಮನುಜ
ರಚನೆ: ಕನಕ ದಾಸರು
ಗಾಯನ: ರಾಜ್ ಕುಮಾರ್

ಎಲ್ಲಾರು ಮಾಡುವುದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಗೇಣು ಬಟ್ಟೆಗಾಗಿ
ಬಿಲ್ಲುಗಳ ಕುಟ್ಟಿಕೊಂಡು ಬಿದುರುಗಳ ಹೊತ್ತುಕೊಂಡು ಕೂಲಿಗಳ ಮಾಡುವುದು ಹೊಟ್ಟೆಗಾಗಿ
ನಾಲ್ಕು ವೇದ ಪುರಾಣ ಪಂಚಾಗ ಹೇಳಿಕೊಂಡು ಕಾಲ ಕಳೆಯುವುದೆಲ್ಲ ಹೊಟ್ಟೆಗಾಗಿ....

ಬಡಿದು ಬಡಿದು ಕಬ್ಬಿಣವ ಕಾಸಿ ತೂಪಾಕಿ ಮಾಡಿ ಹೊಡೆವ ಗುಂಡು ಮಾಡುವುದು ಹೊಟ್ಟೆಗಾಗಿ
ಚಂಡ ಭಂಡರೆಲ್ಲ ಮುಂದೆ ಕತ್ತಿ ಹರಿಗೆಯ ಪಿಡಿದು ಖಂಡ ತುಂಡ ಮಾಡುವುದು ಹೊಟ್ಟೆಗಾಗಿ

ದೊಡ್ಡ ದೊಡ್ಡ ಕುದುರೆ ಏರಿ ನೆಜೆ ಹೊತ್ತು ರಾಹುತನಾಗಿ ಹೊಡೆದಾಡಿ ಸಾಯುವುದು ಹೊಟ್ಟೆಗಾಗಿ
ಕುಂಟೆ ಪೂರಿಗೆಯಿಂದ ಹೆಣತೆ ಮಣ್ಣ ಹದ ಮಾಡಿ ರಂಟೆ ಹೊಡೆದು ಬೆಳೆಸುವುದು ಹೊಟ್ಟೆಗಾಗಿ

ಕೆಟ್ಟತನದಿಂದ ಕಳ್ಳತನವನ್ನೇ ಮಾಡಿ ಕಟ್ಟಿ ಹೊಡಿಸಿಕೊಳ್ಳುವುದು ಹೊಟ್ಟೆಗಾಗಿ
ಸನ್ಯಾಸಿ ಜಂಗಮ ಜೋಗಿ ಜಟ್ಟಿ ಮುಂಡ ಬೈರಾಗಿ ನಾನಾ ವೇಷ ಬೊಂಬುವುದು ಹೊಟ್ಟೆಗಾಗಿ
ಉನ್ನತ ಕಾಗಿನೆಲೆ ಆದಿಕೇಶವನ ಅನುದಿನ ನೆನೆವುದು ಭಕ್ತಿಗಾಗಿ ಪರ ಮುಕ್ತಿಗಾಗಿ....

ನಾವೆಲ್ಲಾರು ಮಾಡುವುದು

 




ಎನ್. ಎಸ್. ಲಕ್ಷ್ಮಿನಾರಾಯಣ ಭಟ್ಟ

ಎಲ್ಲಿ ಜಾರಿತೋ ಮನವು...

- ಎನ್. ಎಸ್. ಲಕ್ಷ್ಮಿನಾರಾಯಣ ಭಟ್ಟ

ಎಲ್ಲಿ ಜಾರಿತೋ ಮನವು ಎಲ್ಲೆ ಮೀರಿತೋ ||
ಎಲ್ಲಿ ಅಲೆಯುತಿಹುದೋ ಏಕೆ ನಿಲ್ಲದಾಯಿತೋ

ದೂರದೊಂದು ತೀರದಿಂದ ತೇಲಿ ಪಾರಿಜಾತ ಗಂಧ
ದಾಟಿ ಬಂತು ಬೇಲಿ ಸಾಲ ಮೀಟಿ ಹಳೆಯ ಮಧುರ ನೋವ

ಬಾನಿನಲ್ಲಿ ಒಂಟಿ ತಾರೆ ಸೊನೆ ಸುರಿವ ಇರುಳ ಮೊರೆ
ಕತ್ತಲಲ್ಲಿ ಕುಳಿತು ಒಳಗೆ ಬಿಕ್ಕುತಿಹಳು ಯಾರೊ ನೀರೆ

ಹಿಂದೆ ಯಾವ ಜನ್ಮದಲ್ಲೊ ಮಿಂದ ಪ್ರೇಮ ಜಲದ ಕಂಪು
ಬಂದು ಚೀರುವೆದೆಯ ಭಾವ ಹೇಳಲಾರೆ ತಾಳಲಾರೆ

ನೀ ಸಿಗದೇ ಬಾಳೊಂದು...

- ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ

ನೀ ಸಿಗದೇ ಬಾಳೊಂದು ಬಾಳೆ ಕೃಷ್ಣ ||
ನಾ ತಾಳಲಾರೆ ವಿರಹ ಕೃಷ್ಣ

ಕಮಲವಿಲ್ಲದ ಕೆರೆ ನನ್ನ ಬಾಳು
ಚಂದ್ರ ಇಲ್ಲದ ರಾತ್ರಿ ಬೀಳು
ನೀ ಸಿಗದೇ ಉರಿ ಉರಿ ಕಳೆದೆ ಇರುಳ
ಮಾತಿಲ್ಲ ಬಿಗಿದಿದೆ ದುಃಖ ಕೊರಳ

ಅನ್ನ ಸೇರದು ನಿದ್ದೆ ಬಂದೂದೆಂದು
ಕೂಡಿವೆ ಒಂದೇ ಸಮ ಕೃಷ್ಣ ಎಂದು
ಯಾರು ಅರಿವರು ಹೇಳು ನನ್ನ ನೋವ
ತಲ್ಲಣಿಸಿ ಕೂಗುತಿದೆ ದಾಸಿ ಜೀವ

ಒಳಗಿರುವ ಗಿರಿಧರನೆ ಹೊರಗೆ ಬಾರೊ
ಕಣ್ಣೆದುರು ನಿಂತು ರೂಪ ತೋರೊ
ಜನುಮ ಜನುಮದ ರಾಗ ನನ್ನ ಪ್ರೀತಿ
ನಿನ್ನೊಳಗೆ ಹರಿವುದೇ ಅದರ ರೀತಿ

-ದ.ರಾ. ಬೇಂದ್ರೆ-ಯುಗ ಯುಗಾದಿ ಕಳೆದರು...

ಯುಗ ಯುಗಾದಿ ಕಳೆದರು...

-.ರಾ. ಬೇಂದ್ರೆ

ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ ಹೊಸೆತು ಹೊಸೆತು ತರುತಿದೆ ||

ಹೊಂಗೆ ಹೂವ ತೊಂಗಳಲಿ ಭೃಂಗದ ಸಂಗೀತ ಕೇಳಿ
ಮತ್ತೆ ಕೇಳ ಬರುತಿದೆ
ಬೇವಿನ ಕಹಿ ಬಾಳಿನಲ್ಲಿ ಹೂವಿನ ನಸುಗಂಪು ಸೂಸಿ
ಜೀವ ಕಳೆಯ ತರುತಿದೆ

ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು
ಅಖಿಲ ಜೀವ ಜಾತಕೆ
ಒಂದೇ ಒಂದು ಜನ್ಮದಲ್ಲಿ ಒಂದೇ ಬಾಲ್ಯ ಒಂದೇ ಹರಯ
ನಮಗದಷ್ಟೇ ಏತಕೋ ?

ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಾಲ ನವಿನ ಜನನ
ನಮಗೆ ಏಕೆ ಬಾರದೋ?
ಎಲೆ ಸನತ್ಕುಮಾರ ದೇವ ಎಲೆ ಸಾಹಸಿ ಚಿರಂಜೀವ
ನಿನಗೆ ಲೀಲೆ ಸೇರದೋ

ಇನ್ನು ಯಾಕ ಬರಲಿಲ್ಲವ್ವ...

- . ರಾ. ಬೇಂದ್ರೆ

ಇನ್ನು ಯಾಕ ಬರಲಿಲ್ಲವ್ವ ಹುಬಳ್ಳಿಯಾವಾ ?
ವಾರದಾಗ ಮೂರು ಸರ್ತಿ ಬಂದು ಹೋದವಾ ||

ಭಾರಿ ಜರದ ವಾರಿ ರುಮ್ಮಾಲ ಸುತ್ತಿಕೊಂಡವ
ತುಂಬ ಮೀಸಿ ತೀಡಿಕೋತ ಹುಬ್ಬ ಹಾರ್ಸಾವಾ
ಮಾತು ಮಾತಿಗೆ ನಕ್ಕ ನಗಿಸಿ ಆಡಿಸ್ಯಾಡವಾ
ಏನೋ ಅಂದರೆ ಏನೋ ಕಟ್ಟಿ ಹಾಡ ಹಾಡವಾ

ಇರು ಅಂದರ ಬರತೇನಂತ ಎದ್ದು ಹೊರಡಾವಾ
ಮಾರಿ ತಿಳಗ ಹಾಕಿತೆಂದರೆ ಎದ್ದು ಬಿಡಾವಾ
ಹಿಡೀ ಹಿಡೀಲೆ ರೊಕ್ಕ ತೆಗದು ಹಿಡಿ ಹಿಡಿ ಅನ್ನಾವಾ
ಖರೆ ಅಂತ ಕೈ ಮಾಡಿದರ ಹಿಡೇದು ಬೀಡಾವ

ಚಹಾದ ಜೋಡಿ ಚೂಡದಾಂಗ ನೀ ನನಗಂದಾವಾ
ಚೌಡಿಯಲ್ಲ ನೀ ಚೂಡ ಮಣಿಯಂತ ರಮೀಸಿ ಬಂದಾವಾ
ಬೆರಳಿಗುಂಗುರ ಮೂಗಿನಾಗ ಮೂಗಬಟ್ಟಿಟ್ಟಾವಾ
ಕಣ್ಣಿನಾಗಿನ ಗೊಂಬೀಹಾಂಗ ಎದ್ಯಾಗ ನಟ್ಟಾವಾ

ಎಲ್ಲಿ, ಮಲ್ಲಿ, ಪಾರಿ, ತಾರಿ ನೋಡಿರೇನ್ರವ್ವ ?
ನಿಂಗಿ, ಸಂಗೀ, ಸಾವಂತರಿ ಎಲ್ಹಾನ ನನ್ನಾವಾ ?
ಸೆಟ್ಟರ ಹುಡುಗ ಸೆಟಗೊಂಡೋದ ಅಂತ ನನ ಜೀವಾ
ಹಾದಿ ಬೀದಿ ಹುಡಕ ತೈತೆ ಬಿಟ್ಟ ಎಲ್ಲ ಹ್ಯಾವಾ