Thursday, January 31, 2013

- ಹೆಚ್. ಎಸ್. ವೆಂಕಟೇಶಮೂರ್ತಿ

ಹುಚ್ಚು ಕೊಡಿ ಮನಸು...

- ಹೆಚ್. ಎಸ್. ವೆಂಕಟೇಶಮೂರ್ತಿ

ಹುಚ್ಚು ಕೊಡಿ ಮನಸು ಅದು ಹದಿನಾರರ ವಯಸು ||
ಮಾತು ಮಾತಿಗೆಕೋ ನಗು ಮರು ಗಳಿಗೆಯೇ ಮೌನ
ಕನ್ನಡಿ ಮುಂದಷ್ಟು ಹೊತ್ತು ಬರೆಯದಿರುವ ಕವನ

ಸೇರೆಗು ತೀದಿದಷ್ಟು ಸುಕ್ಕು ಹಠ ಮಾಡುವ ಕೂದಲು
ನಿರಿಯೇಕೋ ಸರಿಯಾಗದು ಮತ್ತೆ ಒಳಗೆ ಹೋದಳು

ಕೆನ್ನೆ ಕೊಂಚ ಕೆಂಪಾಯಿತೆ ತುಟಿಗೆ ಬಣ್ಣ ಹೆಜ್ಜೆ
ನಗುತ ಅವಳ ಚೇಡಿಸುತಿದೆ ಗಲ್ಲದ ಕರಿ ಮಚ್ಚೆ

ಬರಿ ಹಸಿರು ಬರಿ ಹೂವು ಎದೆಯಲೆಷ್ಟೋ ಹೆಸರು
ಯಾವ ಮಧುವೆ ದಿಬ್ಬಣವೋ ಸುಮ್ಮನೆ ನಿಟ್ಟುಸಿರು
ಉದಯವಾಗಲಿ ನಮ್ಮ...




- ಎಚ್.ಎಸ್. ವೆಂಕಟೇಶಮೂರ್ತಿ

ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ ||
ಎಲ್ಲ ಸೇರಿ ನನ್ನ ಬಾಯಿಗೆ ಬೆಣ್ಣೆಯ ಮೆತ್ತಿದರಮ್ಮ

ನೀನೆ ನೋಡು ಬೆಣ್ಣೆ ಗಡಿಗೆ ಸೂರಿನ ನೆಲುವಲ್ಲಿ
ಹೇಗೆತಾನೆ ತೆಗೆಯಲಿ ಅಮ್ಮ ನನ್ನ ಪುಟ್ಟ ಕೈಗಳಲ್ಲಿ

ಶ್ಯಾಮ ಹೇಳಿದ ಬೆಣ್ಣೆ ಮೆತ್ತಿದ ತನ್ನ ಬಾಯಿ ಒರೆಸುತ್ತಾ
ಬೆಣ್ಣೆ ಒರೆಸಿದ ಕೈಯ ಬೆನ್ನ ಹಿಂದೆ ಮರೆಸುತ್ತ

ಎತ್ತಿದ ಕೈಯ ಕಡಗೋಲನ್ನು ಮೂಲೆಲಿಟ್ಟು ನಕ್ಕಳು ಗೋಪಿ
ಸೂರದಾಸ ಪ್ರಿಯ ಶ್ಯಾಮನ ಮುತ್ತಿಟ್ಟು ನಕ್ಕಳು ಗೋಪಿ
ಒಂದಿರುಳು ಕನಸಿನಲಿ..



- ಕೆ. ಎಸ್. ನರಸಿಂಹಸ್ವಾಮಿ

ಒಂದಿರುಳು ಕನಸಿನಲಿ ನನ್ನವಳ ಕೇಳಿದೆನು
ಚೆಂದ ನಿನಗಾವುದೆಂದು
ನಮ್ಮೂರು ಹೊನ್ನೂರು ನಿಮ್ಮೂರು ನವಿಲೂರು
ಚೆಂದ ನಿನಗಾವುದೆಂದು

ನಮ್ಮೂರು ಚೆಂದವೋ ನಿಮ್ಮೂರು ಚೆಂದವೋ
ಎಂದೆನ್ನ ಕೇಳಲೇಕೆ?
ನಮ್ಮೂರ ಮಂಚದಲಿ ನಿಮ್ಮೂರ ಕನಸಿರಲು
ವಿಸ್ತರಿಸಿ ಹೇಳಬೇಕೆ?
ನಮ್ಮೂರು ಚೆಂದವೋ ನಿಮ್ಮೂರು ಚೆಂದವೋ
ಎಂದೆನ್ನ ಕೇಳಲೇಕೆ?
ಎನ್ನರಸ ಸುಮ್ಮನಿರಿ ಎಂದಳಾಕೆ ||

ತೌರೂರ ದಾರಿಯಲಿ ತೆಂಗುಗಳು ತಲೆದೂಗಿ
ಬಾಳೆಗಳು ತೋಳ ಬೀಸಿ
ಮಲ್ಲಿಗೆಯ ಮೊಗ್ಗುಗಳು ಮುಳ್ಳ ಬೇಲಿಯ ವರಿಸಿ
ಬಳಕುತಿವೆ ಕಂಪ ಸೂಸಿ

ನಗುನಗುತ ನಮ್ಮೂರ ಹೆಣ್ಣುಗಳು ಬರುತಿರಲು
ನಿಮ್ಮೂರ ಸಂತೆಗಾಗಿ
ನವಿಲೂರಿಗಿಂತಲೂ ಹೊನ್ನೂರು ಸುಖವೆಂದು
ನಿಲ್ಲಿಸಿತು ಪ್ರೇಮ ಸೂಸಿ

ನಿಮ್ಮೂರ ಬಂಡಿಯಲಿ ನಮ್ಮೂರ ಬಿಟ್ಟಾಗ
ಓಡಿದುದು ದಾರಿ ಬೇಗ
ಪುಟ್ಟ ಕಂದನ ಕೇಕೆ ತೊಟ್ಟಿಲನು ತುಂಬಿತ್ತು
ನಿಮ್ಮೂರ ಸೇರಿದಾಗ

ಊರ ಬೇಲಿಗೆ ಬಂದು ನೀವು ನಮ್ಮನು ಕಂಡು
ಕುಶಲವನು ಕೇಳಿದಾಗ
ತುಟಿಯಲೇನೋ ನಿಂದು ಕಣ್ಣಲೇನೋ ಬಂದು
ಕೆನ್ನೆ ಕೆಂಪಾದುದಾಗ

No comments: