Thursday, January 31, 2013

- ಹುಯಿಲಗೋಳ ನಾರಾಯಣ ರಾವ್

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ||
ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು

ರಾಜನ್ಯರಿಪು ಪರಶುರಾಮ ನಮ್ಮನ ನಾಡು
ಜಲಧಿಯನೆ ಜಿಗಿದ ಹನುಮನುದಿಸಿದ ನಾಡು
ಓಜೆಯಿಂ ಮೆರೆದರಸುಗಳ ಸಾಹಸದ ಸೂಡು
ತೇಜವನು ನಮಗೀವ ವೀರ ವೃಂದದ ಬೀಡು

ಲೆಕ್ಕಿಗಮಿತಾಕ್ಷರರು ಬೆಳೆದು ಮೆರೆದಿಹ ನಾಡು
ಜಕ್ಕಣನ ಶಿಲ್ಪಿಕಲೆಯಚ್ಚರಿಯ ಕರುಗೋಡು
ಚೊಕ್ಕ ಮತಗಳ ಸಾರಿದವರಿಗಿದು ನೆಲೆವೀಡು
ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು

ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ ನಾಡು
ಕಾವೇರಿ ಗೋದೆಯರು ಮೈದಳೆವ ನಲುನಾಡು
ಆವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು
ಕಾವ ಗದುಗಿನ ವೀರ ನಾರಾಯಣನ ಬೀಡು
ಕರುನಾಳು ಬಾ ಬೆಳಕೆ...

No comments: